Presently: Business | Society | NationFirst #SocialMedia | Dentistry | Pharmacy | Learner |
Feb 22, 2021 • 9 tweets • 2 min read
ರಾಮಮಂದಿರ ನಿರ್ಮಾಣದ ಉಸ್ತುವಾರಿ ಹೊಣೆ ಹೊತ್ತ ಗೋಪಾಲ ಜೀ .
ಹುಟ್ಟಿದ್ದು ಶಿರಸಿಯಲ್ಲಿ, ಬೆಳೆದಿದ್ದು ಬೆಳಗಾವಿಯಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದೆ. ರಾಷ್ಟ್ರಾದ್ಯಂತ ನಿಧಿ ಸಮರ್ಪಣಾ ಕಾರ್ಯವೂ ಸಾಗಿದೆ.
ಇದೀಗ ರಾಮಮಂದಿರ ನಿರ್ಮಾಣ ಕಾರ್ಯದ ಉಸ್ತುವಾರಿ ಹೊಣೆಯನ್ನು ವಿಶ್ವಹಿಂದೂ ಪರಿಷತ್ ಸಂಘಟನಾ ಮಂತ್ರಿ ಗೋಪಾಲಜಿ ಅವರಿಗೆ ವಹಿಸಲಾಗಿದೆ. ಅವರು ಅಯೋಧ್ಯೆಯಲ್ಲೇ ಉಳಿದು ಮಂದಿರ ನಿರ್ಮಾಣ ಕಾರ್ಯದ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ.